ನಮಸ್ತೆ ಕರುನಾಡು, ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಯೋಜನೆಯ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ನೀವು ತಪ್ಪದೇ ಈ ಲೇಖನವನ್ನು ಕೊನೆಯವರೆಗೂ ಓದಿ.
![Muft Bijli Scheme](https://i0.wp.com/news18.vidyamana.com/wp-content/uploads/2024/02/Muft-Bijli-Scheme.jpg?resize=640%2C360&ssl=1)
2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಭಾಷಣ ಮಾಡಿದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್, ಮಫ್ತ್ ಬಿಜ್ಲಿ ಯೋಜನೆಯ ಅಡಿಯಲ್ಲಿ 1 ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ ಕಲ್ಪಿಸಲು ನೆರವನ್ನು ನೀಡಲಾಗುವುದು ಎಂದು ತಿಳಿಸಿದರು.
ಫೆಬ್ರವರಿಯಲ್ಲಿ ಬ್ಯಾಂಕ್ಗಳಿಗೆ ಬರೋಬ್ಬರಿ ರಜೆ! ಸಂಪೂರ್ಣ ಪಟ್ಟಿ ಇಲ್ಲಿದೆ
ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಇದರ ನೆನಪಿಗಾಗಿ ಮೇಲ್ಛಾವಣಿಯ ಮೇಲೆ ಸೋಲಾರ್ ಸಂಪರ್ಕದ ನೆರವು ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯರು ಹೇಳಿದ್ದರು. ಇದನ್ನು ಬಜೆಟ್ ನಲ್ಲಿಯು ಕೂಡ ಅನುಷ್ಠಾನ ಗೊಳಿಸಲಾಗುತ್ತಿದ್ದು, ಇದರಿಂದ 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ಇದು ಒಂದು ರೀತಿ ಉಚಿತ ವಿದ್ಯುತ್ ನೀಡಿದಂತೆ. ಇದರಿಂದ ಕುಟುಂಬಗಳು ವಾರ್ಷಿಕ 15-18 ಸಾವಿರ ವರೆಗೂ ಉಳಿತಾಯ ಮಾಡಬಹುದಾಗಿದೆ ಎಂದು ಹೇಳಿದರು.